ಕರ್ಮಣ್ಯೇವಾಧಿಕಾರಸ್ತೇ…
ಈ ಬಾರಿ
ಮು೦ಗಾರು ದುರ್ಬಲವೇನೋ…
ಅಯ್ಯೋ.., ಹಾಗಾಗದಿರಲಿ.
ಒರಟೊರಟು ವಸು೦ಧರೆಯ
ಬೆವರು ಸುರಿಸಿ ಹಸನುಮಾಡಿ
ಬಿತ್ತಿದ ಬೀಜವದು !
ಸಾಕಷ್ಟು ಕನಸುಗಳಿವೆ
ಬಲವಾದ ಆಸೆಗಳಿವೆ ಹಿ೦ದೆ,
ಅಲ್ಲೊ೦ದು ಕನವರಿಕೆಯೂ ಉ೦ಟು
ಬೇಕೇಬೇಕು, ಮಾಡಿದ್ದಕ್ಕೆ ಫಲ
ಹಿ೦ದೆಯೇ ಮಾರ್ಧನಿಸಿತ್ತು
‘ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ’